ಡೈಲಿ ವಾರ್ತೆ: 09/ಜುಲೈ/2025

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಉಡುಪಿ ಜಿಲ್ಲಾ ಘಟಕ ವತಿಯಿಂದ ಮುಳುಗು ತಜ್ಞ ಈಶ್ವರ್ ಮಲ್ಪೆಗೆ ಸನ್ಮಾನ

ಕುಂದಾಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಉಡುಪಿ ಜಿಲ್ಲಾ ಘಟಕ ಮತ್ತು ಅಂಬೇಡ್ಕರ್ ಸೇನೆ ಉಡುಪಿ ವತಿಯಿಂದ ಮಂಗಳವಾರ ಉಡುಪಿ ಜಿಲ್ಲೆಯ ಕುಂದಾಪುರ ದ ತ್ರಾಸಿಯ ಪ್ರೆಸ್ಟಿಜ್ ಹಾಲ್ನಲ್ಲಿ ಪತ್ರಿಕಾ ದಿನಾಚಾರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಕರಾವಳಿಯ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರನ್ನು ಸನ್ಮಾನಿಸಲಾಯಿತು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಪರವಾಗಿ ಜಿಲ್ಲಾಧ್ಯಕ್ಷ ದಾಮೋದರ ಮೊಗವೀರ ಮತ್ತು ಜಿಲ್ಲಾಉಪಾಧ್ಯಕ್ಷ ಸತೀಶ್ ಕಂಚುಗೋದ ಅವರು ಕರಾವಳಿಯ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ
ಅವರಿಗೆ ಶಾಲು ಹೊದಿಸಿ, ಪೇಟ , ತೊಡಿಸಿ , ಹಾರ ಹಾಕಿ ಸ್ಮರಣಿಕೆಯನ್ನು ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕ್ಲಾಸಿಕ್ ಬಿಲ್ಡರ್ಸ್ ಮಾಲಕರಾದ ಪ್ರಭಾಕರ್ ಪೂಜಾರಿ ಉಡುಪಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ ಅಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ , ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಕರಾವಳಿ ಕರ್ನಾಟಕ ವಿಭಾಗ ಅಧ್ಯಕ್ಷ ಕುಮಾರ ನಾಯ್ಕ, ಕುಂದಾಪುರ ವಲಯ ಅರಣ್ಯ ಅಧಿಕಾರಿ ರಾಘವೇಂದ್ರ ನಾಯ್ಕ, ಕುಂದಾಪುರ ಸರ್ಕಾರಿ ಆಸ್ಪತ್ರೆ ವೈದ್ಯ ಡಾಕ್ಟರ್ ನಾಗೇಶ್ ಪುತ್ರನ್ , ಉದ್ಯಮಿ ಶಿವ ಪೂಜಾರಿ, ಉದ್ಯಮಿ ಪ್ರವೀಣ್ ಶೆಟ್ಟಿ, ಯುವ ಉದ್ಯಮಿ ಮಂಜುನಾಥ್ ಪೂಜಾರಿ ,ಸಮಾಜ ಸೇವಕ ಮಂಜುನಾಥ್ ಸಾಲಿಯಾನ್ ಮುಂತಾದ ಗಣ್ಯರು , ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಉಡುಪಿ ಜಿಲ್ಲೆ ಅಧ್ಯಕ್ಷ ದಾಮೋದರ್ ಮೊಗವೀರ, ಉಪಾಧ್ಯಕ್ಷ ಸತೀಶ್ ಕಂಚುಗೂಡು, ಉಡುಪಿ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.