ಡೈಲಿ ವಾರ್ತೆ: 13/ಜುಲೈ/2025

ಬೈಂದೂರು| ಅಕ್ರಮ ಗೋ ಸಾಗಾಟ ಪ್ರಕರಣ: ಇಬ್ಬರ ಬಂಧನ, ಕಾರು ವಶಕ್ಕೆ – 4 ಜಾನುವಾರುಗಳ ರಕ್ಷಣೆ

ಕುಂದಾಪುರ: ಬೈಂದೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಆಗಾಗ್ಗೆ ನಡೆಯುತ್ತಿದ್ದ ದನ ಕಳ್ಳತನ ಪ್ರಕರಣಗಳ ಹಿನ್ನೆಲೆಯಲ್ಲಿ ಆರೋಪಿಗಳ ಪತ್ತೆ ಬಗ್ಗೆ ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ಹರಿರಾಂ ಶಂಕ‌ರ್ ಅವರ ಮಾರ್ಗದರ್ಶನದಲ್ಲಿ ಪ್ರಕರಣದ ತನಿಖೆಗೆ ಮೂರು ತಂಡಗಳನ್ನು ರಚಿಸಲಾಗಿತ್ತು.

ಅದರಂತೆ ಪೊಲೀಸ್ ಇಲಾಖೆಯ ಕಾರ್ಯಾಚರಣೆ ಮೂಲಕ ಇಬ್ಬರು ಆರೋಪಿಗಳ ಸಹಿತ ಸಾಗಾಟಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆಯಲಾಯಿತು.

ಪ್ರಕರಣಗಳಲ್ಲಿ ಮೊಹಮ್ಮದ ಕೈಪ್ ಸಾಸ್ತಾನ ಮತ್ತು ಮೊಹಮ್ಮದ್ ಸುಹೇಲ್ ಖಾದರ್ ಉಚ್ಚಿಲ ಎನ್ನುವ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಜಾನುವಾರುಗಳನ್ನು ಕಳವು ಮಾಡಿ ಸಾಗಾಟ ಮಾಡಿದ ಕಾರುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಅಲ್ಲದೆ ಕಾರಿನಲ್ಲಿ ಸಾಗಾಟ ಮಾಡಿದ 4 ದನಗಳನ್ನು ರಕ್ಷಿಸಿ ಗೋಶಾಲೆ ಬಿಡಲಾಗಿದೆ ಎಂದು
ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.