


ಡೈಲಿ ವಾರ್ತೆ: 23/ಜುಲೈ/2025


ಕೋಟದ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಆಸಾಡಿ ಒಡ್ರ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ:
ಕುಂದಾಪ್ರ ಭಾಷೆಗೆ ವಿಶ್ವಮಾನ್ಯತೆ – ಆನಂದ್ ಸಿ ಕುಂದರ್

ಕೋಟ: ಕುಂದಾಪ್ರ ಭಾಷೆ ,ಇಲ್ಲಿನ ವಿವಿಧ ಜನಾಂಗದ ಬದುಕಿನ ಜೀವನ ಪರಿ ವಿಶ್ವಮಟ್ಟದಲ್ಲಿ ಪಸರಿಸಿಕೊಂಡಿದೆ ಈ ಬಗ್ಗೆ ಅಧ್ಯಯನ ಅಗತ್ಯ ಮುಂದಿನ ತಲೆಮಾರಿಗೆ ಅನುಕೂಲವಾಗಲಿದೆ ಎಂದು ಮಣೂರು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಅಭಿಪ್ರಾಯಪಟ್ಟರು.
ಬುಧವಾರ ಕೋಟದ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಮಾರ್ಗದರ್ಶನದಲ್ಲಿ ಇದೇ ಬರುವ ಆ. 10ರಂದು ಕೋಟದ ಹಂದಟ್ಟಿನಲ್ಲಿ ನಡೆಯಲಿರುವ ಊರ್ ಕೇರಿ ಬದ್ಕಿನ ಹಬ್ಬ ಎಂಬ ಆಸಾಡಿ ಒಡ್ರ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ ನಮ್ಮಜೀವನ ಪದ್ದತಿ ,ಭಾಷೆ ಜಗತ್ತನಲ್ಲಿ ಶೇಷ್ಠತೆ ಪಡೆದುಕೊಂಡಿದೆ ಅದನ್ನು ಉಳಿಸಿ ಬೆಳೆಸಬೇಕಾದರೆ ಈ ರೀತಿಯ ಕಾರ್ಯಕ್ರಮಗಳು ಆಗಿಂದಾಗ ನಡೆಯುತ್ತಿರಬೇಕು ನಮ್ಮ ಭಾಷೆ,ಬದುಕಿನ ವಿಚಾರಧಾರೆಗಳು ಉಳಿಯಬೇಕಾದರೆ ನಮ್ಮ ಮನೆಯಲ್ಲಿ ಅದನ್ನು ದೈನಂದಿನ ಬದುಕಿನಲ್ಲಿ ಅಳವಡಿಸಿ ಯುವ ಜನಾಂಗಕ್ಕೆ ಊಣಬಡಿಸಬೇಕು ಎಂದು ಪಂಚವರ್ಣ ಮಹಿಳಾ ಮಂಡಲದ ಈ ರೀತಿಯ ಕಾರ್ಯಕ್ರಮವನ್ನು ಶ್ಲಾಘಿಸಿದರು.
ಇದೇ ವೇಳೆ ಗಣ್ಯರ ಸಮ್ಮುಖದಲ್ಲಿ ಆನಂದ್ ಸಿ ಕುಂದರ್ ಗೃಹದಲ್ಲಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.
ಸಭೆಯಲ್ಲಿ ಕೋಟದ ಮಹತೋಭಾರ ಹಿರೇಮಹಾಲಿಂಗೇಶ್ಚರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯ ಮಣೂರು ಭಾಸ್ಕರ್ ಶೆಟ್ಟಿ, ಕೋಟ ಮಣೂರು ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ, ಪಂಚವರ್ಣದ ಗೌರವಾಧ್ಯಕ್ಷ ಸತೀಶ್ ಹೆಚ್ ಕುಂದರ್, ಪಂಚವರ್ಣ ಪೋಷಕರಾದ ವಿಷ್ಣುಮೂರ್ತಿ ಮಯ್ಯ ಮಣೂರು, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ,ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ, ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣ ಗ ಉಪಸ್ಥಿತರಿದ್ದರು. ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿ ಪ್ರಾಸ್ತಾವನೆ ಸಲ್ಲಿಸಿದರು.
ಸಂಚಾಲಕಿ ಸುಜಾತ ಎಂ ಬಾಯರಿ ನಿರೂಪಿಸಿದರು.
ಕಾರ್ಯದರ್ಶಿ ವಸಂತಿ ಹಂದಟ್ಟು ವಂದಿಸಿದರು.