


ಡೈಲಿ ವಾರ್ತೆ: 31/ಜುಲೈ/2025


ಹಿರಿಯಡ್ಕ| ಅಕ್ರಮ ಜಾನುವಾರು ಸಾಗಾಟ, ಇಬ್ಬರ ಬಂಧನ

ಉಡುಪಿ: ಉಡುಪಿ ಜಿಲ್ಲೆಯ ಹಿರಿಯಡ್ಕ ಸಮೀಪ ಇಬ್ಬರು ವ್ಯಕ್ತಿಗಳು ಹಿಂಸಾತ್ಮಕವಾಗಿ ಜಾನುವಾರುಗಳನ್ನು ಪಿಕಪ್ ವಾಹನದಲ್ಲಿ ಸಾಗಾಟ ಮಾಡುತ್ತಿರುವಾಗ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳು ಕಾಪು ನಿವಾಸಿ ಮೆಹಬೂಬ ಸಾಹೇಬ್(65) ಹಾಗೂ ಸುಳ್ಯದ ನಿವಾಸಿ ಪದ್ಮನಾಭ(57) ಎಂದು ತಿಳಿದು ಬಂದಿದೆ.
ಪ್ರಕರಣದ ಸಾರಾಂಶ: ವಿಠ್ಠಲ ಮಲವಡಕರ, ಪಿಎಸ್ಐ, ಹಿರಿಯಡ್ಕ ಪೊಲೀಸ್ ಠಾಣೆ ಇವರು ಜು.30 ರಂದು
ಸಿಬ್ಬಂದಿಯೊಂದಿಗೆ ಠಾಣಾ ವ್ಯಾಪ್ತಿಯಲ್ಲಿ ಹಗಲು ಠಾಣಾ ರೌಂಡ್ಸ್ ಕರ್ತವ್ಯದಲ್ಲಿರುವಾಗ ಬಂದ ಮಾಹಿತಿಯಂತೆ ಉಡುಪಿ ತಾಲೂಕು ಆತ್ರಾಡಿ ಗ್ರಾಮದ ಪರೀಕ ಶಿವಗುಂಡಿ ಎಂಬಲ್ಲಿರುವ ಮಣ್ಣು ರಸ್ತೆಯಲ್ಲಿ ಮೇಯುತ್ತಿದ್ದ 2 ಜಾನುವಾರುಗಳನ್ನು ಆರೋಪಿಗಳಾದ ಮೆಹಬೂಬ ಸಾಹೇಬ್ ಹಾಗೂ ಪದ್ಮನಾಭ ಇವರು ಪಿಕಪ್ ವಾಹನದಲ್ಲಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿಕೊಂಡು ವಧೆ ಮಾಡುವ ಬಗ್ಗೆ ಕಸಾಯಿಖಾನೆಗೆ ಮಾರಾಟ ಮಾಡಲು ಕೊಂಡು ಹೋಗುತ್ತಿದ್ದವರನ್ನು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.