ಡೈಲಿ ವಾರ್ತೆ: 08/ಆಗಸ್ಟ್/ 2025

ಕಾಂತಾರ ಸಿನಿಮಾ ನಟ,
ಹಿರಿಯ ರಂಗಭೂಮಿ ಕಲಾವಿದ, ಟಿ ಪ್ರಭಾಕರ ಕಲ್ಯಾಣಿ ಹೃದಯಘಾತದಿಂದ ಮೃತ್ಯು!

ಉಡುಪಿ: ಹಿರಿಯ ರಂಗಭೂಮಿ ಕಲಾವಿದ, ಪೆರ್ಡೂರು ಮೂಲದ ನಿವೃತ್ತ ಬ್ಯಾಂಕ್ ಉದ್ಯೋಗಿ, ಟಿ ಪ್ರಭಾಕರ ಕಲ್ಯಾಣಿ ಅವರು ಹೃದಯಘಾತದಿಂದ ಆ. 8ರ ಶುಕ್ರವಾರ ಮೃತಪಟ್ಟಿದ್ದಾರೆ.

ಕಳೆದ 3 ದಿನಗಳ ಹಿಂದೆ ಹಿರಿಯಡಕ ಪೇಟೆಯಲ್ಲಿ ತಲೆ ಸುತ್ತಿ ಬಿದ್ದಿದ್ದರು. ಇಂದು ಶುಕ್ರವಾರ ಬೆಳಿಗ್ಗೆ ಮಲಗಿದಲ್ಲಿಯೇ ಹೃದಯಘಾತದಿಂದ ನಿಧನರಾಗಿದ್ದಾರೆ.
5 ವರ್ಷದ ಹಿಂದೆ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಸ್ಟಂಟ್ ಹಾಕಲಾಗಿತ್ತು. ಮೃತರು ರಂಗಭೂಮಿ ಕಲಾವಿದರಾಗಿದ್ದು, ಕಾಂತಾರ ಚಿತ್ರದಲ್ಲಿ ಕಲಾವಿದರಾಗಿ ಅಭಿನಯಿಸಿದ್ದಾರೆ.

ಮೃತರು ಪತ್ನಿ, ಓರ್ವ ಪುತ್ರ, ಅನೇಕ ಬಂಧು-ಮಿತ್ರರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಬೀಡಿನ ಗುಡ್ಡೆ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.