ಡೈಲಿ ವಾರ್ತೆ: 12/ಆಗಸ್ಟ್/ 2025

ಕೋಟ| ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಶಿಕ್ಷಕ ಚಿಕಿತ್ಸೆ ಫಲಿಸದೆ ಸಾವು!

ಕೋಟ: ಬೈಕ್ ಹಾಗೂ ಲಾರಿ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಕೋಟ ಮಣೂರು ಪಡುಕರೆ ನಿವಾಸಿ ಶಿಕ್ಷಕ ಸಂತೋಷ ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಿಗ್ಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಆ.8 ರಂದು ತೆಕ್ಕಟ್ಟೆಯಿಂದ ಕೋಟ ಕಡೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ್ದ ವೇಳೆ ಕೋಟ ಮಣೂರಿನಲ್ಲಿ
ಬೈಕ್ ಗೆ ಹಿಂದಿನಿಂದ ಬಂದ ಲಾರಿಯೊಂದು‌ ಡಿಕ್ಕಿ‌ ಹೊಡೆದ ಪರಿಣಾಮ‌ ಬೈಕ್ ಸವಾರ ಸಂತೋಷ್ ರಸ್ತೆಗೆ ಬಿದ್ದು ತಲೆ ಮತ್ತು ಮುಖ ಕೈಗಳಿಗೆ ಗಂಭೀರ ಸ್ವರೂಪದ‌ ಗಾಯಗಳಾಗಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಸಂತೋಷ್ ಮಂಗಳವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ಲಾರಿ ಚಾಲಕ ಲಾರಿ ನಿಲ್ಲಿಸದೆ ಪರಾರಿಯಾಗಿದ್ದು, ಕೋಟ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
.