


ಡೈಲಿ ವಾರ್ತೆ: 12/ಆಗಸ್ಟ್/ 2025


ಕೊಡಾಜೆ : ಪಂತಡ್ಕ ಮದರಸ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ, ಶಿಕ್ಷಕ ರಕ್ಷಕ ಸಭೆ

ಬಂಟ್ವಾಳ : ಕೊಡಾಜೆ ಬದ್ರಿಯಾ ಜುಮಾ ಮಸೀದಿ ಇದರ ಅಧೀನದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇಲ್ಲಿನ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಹಾಗೂ ಶಿಕ್ಷಕ – ರಕ್ಷಕರ ಸಭೆಯು ಇತ್ತೀಚೆಗೆ ಮುಂದುವರಿಸಿದಲ್ಲಿ ನಡೆಯಿತು.

ಸ್ಮಾರ್ಟ್ ಕ್ಲಾಸ್ ಹಾಗೂ ಶಿಕ್ಷಕ ರಕ್ಷಕರ ಸಭೆಯನ್ನು ಕೊಡಾಜೆ ಬದ್ರಿಯಾ ಜುಮಾ ಮಸೀದಿ ಖತೀಬ್ ಅಬ್ದುಲ್ ಅಝೀಝ್ ದಾರಿಮಿ ಪೊನ್ಮಳ ಉದ್ಘಾಟಿಸಿದರು. ಮಸೀದಿ ಅಧ್ಯಕ್ಷ ಅಬ್ಬಾಸ್ (ಮೆಸ್ಕಾಂ) ನೇರಳಕಟ್ಟೆ ಅಧ್ಯಕ್ಷತೆ ವಹಿಸಿದ್ದರು.

ಪಂತಡ್ಕ ಮಸೀದಿ ಉಸ್ತುವಾರಿ ಸಮಿತಿ ಅಧ್ಯಕ್ಷ ಹಂಝ ಹಾಜಿ ಪಂತಡ್ಕ, ಉಪಾಧ್ಯಕ್ಷ ಇಬ್ರಾಹಿಂ ಹಾಜಿ ನೆಡ್ಯಾಲು, ಜೊತೆ ಕಾರ್ಯದರ್ಶಿ ಇಂಜಿನಿಯರ್ ಲತೀಫ್ ಕೊಡಾಜೆ, ಅಬ್ದುರ್ರಹ್ಮಾನ್ ಫೈಝಿ ನೆಡ್ಯಾಲು ಉಪಸ್ಥಿತರಿದ್ದರು.
ಪಂತಡ್ಕ ಮದರಸ ಮುಖ್ಯ ಶಿಕ್ಷಕ ಜಾಫರ್ ಸ್ವಾದಿಕ್ ಅರ್ಶದಿ ಸ್ವಾಗತಿಸಿ, ವಂದಿಸಿದರು. ಪಂತಡ್ಕ ಹಾಗೂ ಕೊಡಾಜೆ ಮದ್ರಸ ಉಸ್ತುವಾರಿ ಲತೀಫ್ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು.