ಡೈಲಿ ವಾರ್ತೆ: 15/ಆಗಸ್ಟ್/ 2025

ಬಾಳೆಬೆಟ್ಟು ಫ್ರೆಂಡ್ಸ್ ವತಿಯಿಂದ
79ನೇ ಸ್ವಾತಂತ್ರ್ಯೋತ್ಸವ ಆಚರಣೆ – ಎಸ್ಸೆಸ್ಸೆಲ್ಸಿಯಲ್ಲಿ ರ‍್ಯಾಂಕ್ ಬಂದ ವಿದ್ಯಾರ್ಥಿಗಳಿಗೆ ಸನ್ಮಾನ

ಕೋಟ: 79 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಾಳೆಬೆಟ್ಟು ಫ್ರೆಂಡ್ಸ್ ವತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ಮಣೂರು ಗ್ರಾಮದ ನಿಧಿ ಪೈ( 625/625) , ಹಾಗೂ ಅತ್ಯಧಿಕ ಅಂಕ ಗಳಿಸಿದ ದೀಕ್ಷಾ ಹೆಗಡೆ (625/619) ಹಾಗೂ ಸ್ಕಂದ ಪೈ( 625/611) ಇವರ ಮನೆಗಳಿಗೆ ತೆರಳಿ ಅಭಿನಂದನೆ ಸಲ್ಲಿಸಲಾಯಿತು. ಮತ್ತು ಸ್ವಾತಂತ್ರ್ಯೋ ತ್ಸವದ ಅಂಗವಾಗಿ ಮಣೂರು ರಾಮ ಪ್ರಸಾದ ಅಂಗನವಾಡಿ ಮತ್ತು ಕಂಬಳಗದ್ದೆಬೆಟ್ಟು ಅಂಗನವಾಡಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಬಾಳೆಬೆಟ್ಟು ಫ್ರೆಂಡ್ಸ್ ಅಧ್ಯಕ್ಷ ರತ್ನಾಕರ ಪೂಜಾರಿ, ಕಾರ್ಯದರ್ಶಿ ಅವಿನಾಶ್ ಶೆಟ್ಟಿ , ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರಸಾದ್ ಬಿಲ್ಲವ , ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರ ಪೂಜಾರಿ ಕದ್ರಿಕಟ್ಟು , ಶ್ರೀಮತಿ ವನಿತಾ ಶ್ರೀಧರ ಆಚಾರ್, ಶ್ರೀಮತಿ ಶಾಂತ ,ಸ್ಥಳೀಯರಾದ ಗೋಪಾಲ್ ಮಡಿವಾಳ ಹಾಗೂ ಬಾಳೆಬೆಟ್ಟು ಫ್ರೆಂಡ್ಸ್ ಸದಸ್ಯರು ಉಪಸ್ಥಿತರಿದ್ದರು.