ಡೈಲಿ ವಾರ್ತೆ: 16/ಆಗಸ್ಟ್/ 2025

ಬಂಟ್ವಾಳ| ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಬಂಟ್ವಾಳ : ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡುವುದು ಅಷ್ಟೊಂದು ಸುಲಭದ ಕೆಲಸವಾಗಿರಲಿಲ್ಲ.ಅದಕ್ಕಾಗಿ ಅನೇಕ ಹಿರಿಯರು ತಮ್ಮ ಸ್ವಾರ್ಥ ಮರೆತು ಬ್ರಿಟಿಷ್ ಪಾರುಪತ್ಯದ ವಿರುದ್ದ ಹೋರಾಡಿದ್ದಾರೆ. ಇವತ್ತಿನ ನಮ್ಮ ಸ್ವಾತಂತ್ರ್ಯವನ್ನು ಯಾವ ಕಾಲಕ್ಕೂ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮ ಮೇಲಿದೆ. ಯಾವುದೇ ಸಂದರ್ಭದಲ್ಲಿ ಏನೇ ಆದರೂ ದೇಶ ಮೊದಲು ಎಂಬ ಪ್ರಾಮಾಣಿಕ ಭಾವದಿಂದ ನಮ್ಮ ದೇಶವನ್ನು ರಕ್ಷಿಸೋಣ ಎಂದು ಹಿರಿಯ ಯಕ್ಷಗಾನ ಅರ್ಥಧಾರಿ, ವಿಶ್ರಾಂತ ಮುಖ್ಯೋಪಾಧ್ಯಾಯ ಸಂಕಪ್ಪ ಶೆಟ್ಟಿ ಸಂಚಯಗಿರಿ ಹೇಳಿದರು.

ಬಂಟ್ವಾಳ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಬಿ.ಸಿ.ರೋಡಿನ ಕನ್ನಡ ಭವನದ ಆವರಣದಲ್ಲಿ ಏರ್ಪಡಿಸಿದ್ದ 79 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಬಂಟ್ವಾಳ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಧ್ವಜಾರೋಹಣಗೈದರು.

ಕಸಾಪ ಬಂಟ್ವಾಳ ಇದರ ಸಂಘಟನಾ ಕಾರ್ಯದರ್ಶಿ ಜಯರಾಮ ಪಡ್ರೆ, ತುಂಬೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸಾಯಿರಾಮ್ ಜೆ ನಾಯಕ್ ಕೆ , ಲತೀಫ್, ವಿ.ಸು.ಭಟ್, ಪಿ.ಮಹಮ್ಮದ್
ಮೊದಲಾದವರು ಉಪಸ್ಥಿತರಿದ್ದರು .