


ಡೈಲಿ ವಾರ್ತೆ: 18/ಆಗಸ್ಟ್/ 2025


ಉತ್ತರ ಕನ್ನಡ|ಭಾರಿ ಮಳೆ ಎಚ್ಚರಿಕೆ, ನಾಳೆ (ಆ.19) ರಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ
ಕರ್ನಾಟಕದಲ್ಲಿ ಮತ್ತೆ ಮಳೆರಾಯನ ಆರ್ಭಟ ಮುಂದುವರೆದಿದೆ. ಆಗಸ್ಟ್ 24ರವರೆಗೆ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.
ಮಂಗಳವಾರ (ಆ.19) ದಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು, ಮುಂಜಾಗ್ರತಾ ಕ್ರಮವಾಗಿ
ಜಿಲ್ಲೆಯ 11 ತಾಲೂಕಿನ ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.