


ಡೈಲಿ ವಾರ್ತೆ: 23/ಆಗಸ್ಟ್/ 2025


ಮಾಸ್ಕ್ಮ್ಯಾನ್ ಬಂಧನ: ಎಲ್ಲ ಆರೋಪಗಳಿಂದ ತೊಳೆದಂತಾಗಿದೆ – ವೀರೇಂದ್ರ ಹೆಗ್ಗಡೆ

ಮಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದಾಗಿ ಹೇಳಿದ್ದ ಚಿನ್ನಯ್ಯನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಮಾತನಾಡಿದ್ದಾರೆ.
“ಒಂದೊಂದೇ ಸತ್ಯ ಸಂಗತಿ ಹೊರಬರುತ್ತಿವೆ. “ಇದರ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ಈಗ ಎಲ್ಲ ಆರೋಪಗಳಿಂದ ತೊಳೆದಂತಾಗಿದೆ”. ನಿಮ್ಮೆಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ. ದೇವರ ಆಶೀರ್ವಾದ ಈ ಕ್ಷೇತ್ರದ ಮೇಲಿರಲಿದೆ ಎಂದು ಹೇಳಿದರು.