


ಡೈಲಿ ವಾರ್ತೆ: 25/ಆಗಸ್ಟ್/ 2025


ವಿಕಲಚೇತನರಿಗೆ ವಿವಿಧ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಂಗವಿಕಲರಿಗಾಗಿ, ಸರ್ಕಾರ ಅನುಷ್ಟಾನಗೊಳಿಸಲಾದ ಯೋಜನೆಗಳಾದ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ವಿಕಲಚೇತನ ವ್ಯಕ್ತಿಯನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗೆ ವಿವಾಹ ಪ್ರೋತ್ಸಾಹಧನ, ಬ್ಯಾಟರಿಚಾಲಿತ ಗಾಲಿಕುರ್ಚಿ, ನಿರಾಮಯ ಯೋಜನೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಸ್ಪರ್ಧಾ ಚೇತನ ಯೋಜನೆಗಳ ಸೌಲಭ್ಯ ಪಡೆಯಲು ಜಿಲ್ಲೆಯ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳಮಹಡಿ, ಸಿಂಡಿಕೇಟ್ ಬ್ಯಾಂಕ್ ಹತ್ತಿರ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಅಥವಾ ಖುದ್ದಾಗಿ ಮೇಲ್ಕಂಡ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.