


ಡೈಲಿ ವಾರ್ತೆ: 28//ಆಗಸ್ಟ್/ 2025


ತಲಪಾಡಿಯಲ್ಲಿ ಆಟೋ ರಿಕ್ಷಾ ಹಾಗೂ ಬಸ್ ನಡುವೆ ಭೀಕರ ಅಪಘಾತ – ಐವರು ಸ್ಥಳದಲ್ಲೇ ಸಾವು!

ಮಂಗಳೂರು: ಕೆ ಸಿರೋಡ್ ಸಮೀಪದ ತಲಪಾಡಿ ಟೋಲ್
ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಕೆಸಿ ರೋಡ್ ನಿಂದ ಬರುತ್ತಿದ್ದ ರಿಕ್ಷಾ ಮತ್ತು ಬಸ್ ಮಧ್ಯೆ ಮೇಲಿನ ತಲಪಾಡಿ ಅಪಘಾತ ನಡೆದಿದ್ದು ರಿಕ್ಷಾದಲ್ಲಿದ್ದ ಕೆಸಿ ರೋಡ್ ಮೂಲದವರೆನ್ನಲಾದ 5 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ..
ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ಮಗು ಸೇರಿದೆ ಎನ್ನಲಾಗುತ್ತಿದ್ದು, ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿರುವ ಮಾಹಿತಿಯಿದೆ. ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.