ಡೈಲಿ ವಾರ್ತೆ: 05/ಸೆ./2025

ಬಂಟ್ವಾಳ| ಜಾನುವಾರು ಕಳವು, ಹಾಗೂ ಅದರ ಅಂಗಾಂಗ ಪತ್ತೆಯಾದ ಪ್ರಕರಣ: ಮೂವರು ಆರೋಪಿಗಳ ಬಂಧನ

ಬಂಟ್ವಾಳ : ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಬಳಿ ಆಗಸ್ಟ್ 14 ರಂದು ನಡೆದ ಜಾನುವಾರು ಕಳವು ಹಾಗೂ ಮರುದಿನ ಅದರ ಅಂಗಾಂಗ ಪತ್ತೆಯಾದ ಪ್ರಕರಣ ಬೇಧಿಸಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಉಳ್ಳಾಲ-ಚೆಂಬುಗುಡ್ಡೆ ನಿವಾಸಿ ಇರ್ಶಾದ್ (34), ಮಂಗಳೂರು-ಕುದ್ರೋಳಿ ನಿವಾಸಿ ಮಹಮ್ಮದ್ ಮನ್ಸೂರ್ (48) ಹಾಗೂ ಮಂಗಳೂರು-ಕಣ್ಣೂರು ನಿವಾಸಿ ಅಬ್ದುಲ್ ಅಝೀಂ (18) ಎಂದು ಹೆಸರಿಸಲಾಗಿದೆ.

ಆಗಸ್ಟ್ 14 ರಂದು ತುಂಬೆ ಬಳಿ ಜಾನುವಾರು ಕಳವು ಹಾಗೂ ಅದರ ಅಂಗಾಗಗಳು ಮರುದಿನ ಅಲ್ಲೆ ಸಮೀಪದಲ್ಲಿ ಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ಶುಕ್ರವಾರ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿಚಾರಣೆಯ ವೇಳೆ ಗುರುವಾರ (ಆಗಸ್ಟ್ 4) ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲೂ ಆರೋಪಿಗಳಾಗಿರುವುದು ತಿಳಿದುಬಂದಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.