ಡೈಲಿ ವಾರ್ತೆ: 20/ಸೆ./2025

ಮಣಿಪಾಲ| ವಿದ್ಯಾರ್ಥಿಗಳ ನಡುವೆ ಮಾರಮಾರಿ – ಮೂವರ ಬಂಧನ

ಮಣಿಪಾಲ: ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳ ನಡುವೆ ಮಾರಮಾರಿ ನಡೆದಿದ್ದು ಓರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.

ಗಾಯಗೊಂಡ ವಿದ್ಯಾರ್ಥಿ ರಾಜ್ ಗಿರೀಶ್ ಸುವರ್ಣ ಹಾಗೂ ಅವನ ಸ್ನೇಹಿತ ಸಾತ್ವಿಕ್ ಭಂಡಾರಿ ಎಂದು ತಿಳಿದು ಬಂದಿದೆ.

ಈ ವಿದ್ಯಾರ್ಥಿಗಳು ತರಗತಿಯಲ್ಲಿ ಇದ್ದ ಸಂದರ್ಭ ಆರೋಪಿಗಳಾದ ರಾಜ್ ವೀರ್ ಸಿಂಗ್, ವಿಕ್ರಮ್ ಸಿಂಗ್ ಹಾಗೂ ಕ್ರಿಶ್ ಅವರು ತರಗತಿಗೆ ಬಂದು ಅವಾಚ್ಯ ಶಬ್ದಗಳಿಂದ ಬೈದು, ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾರೆ.

ಈ ಜಗಳದಲ್ಲಿ ಸಾತ್ವಿಕ್ ಭಂಡಾರಿ ಎಡ ಕೈಭುಜದ ಮೂಳೆ ಮುರಿದಿದ್ದು, ಗಂಭೀರ ಗಾಯಗೊಂಡಿದ್ದಾರೆ. ಈ ಕುರಿತು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳು ಅದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಮಾದಕ ಪದಾರ್ಥ ಸೇವನೆ ಮಾಡಿರುವುದು ದೃಢಪಟ್ಟಿದೆ. ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.