



ಡೈಲಿ ವಾರ್ತೆ: 12/ಅ./2025

ತೆಕ್ಕಟ್ಟೆ| ಕ್ರೇನ್ ಹರಿದು ಸ್ಕೂಟರ್ ಸವಾರ ಗಂಭೀರ ಗಾಯ

ತೆಕ್ಕಟ್ಟೆ:ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿ ಬಿದ್ದು ಸವಾರನ ಮೇಲೆ ಕ್ರೇನ್ ಹರಿದು ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಜಂಕ್ಷನ್ನಲ್ಲಿ ನಡೆದಿದೆ.
ಮಣೂರಿನ ಕಂಬಳಗದ್ದೆಬೆಟ್ಟು ನಿವಾಸಿ ಅಭಿಷೇಕ್ ಪೂಜಾರಿ (23) ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ಎಂದು ತಿಳಿದು ಬಂದಿದೆ.
ಶನಿವಾರ ಬೆಳಗ್ಗೆ ಅವರು ಮನೆಯಿಂದ ಕೆಲಸದ ನಿಮಿತ್ತ ಕುಂದಾಪುರದ ಕಡೆಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವೇಳೆ ಬೈಕೊಂದು ಅಡ್ಡಬಂದ ಪರಿಣಾಮ ಅಭಿಷೇಕ್ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಉರುಳಿ ಬಿದ್ದರು ಅಷ್ಟರಲ್ಲಿಯೇ ಹಿಂದಿನಿಂದ ಬಂದ ಕ್ರೇನ್ ಅವರ ಮೇಲೆಯೇ ಹರಿಯಿತು. ಕೂಡಲೇ ಗಾಯಗೊಂಡ ಸ್ಕೂಟರ್ ಸವಾರನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ಸಾಗಿಸಿ ತುರ್ತು ಚಿಕಿತ್ಸೆ ನೀಡಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರು.
ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.