



ಡೈಲಿ ವಾರ್ತೆ: 05/NOV/2025

ಕೋಟತಟ್ಟು ಗ್ರಾಮ ಪಂಚಾಯಿತಿನಲ್ಲಿ ವಿಕಲ ಚೇತನರ ಸಭೆ

ಕೋಟ: ಕೋಟತಟ್ಟು ಗ್ರಾಮ ಪಂಚಾಯಿತಿನಲ್ಲಿ ವಿಕಲ ಚೇತನರ ಸಭೆಯು ನ.4 ರಂದು ಮಂಗಳವಾರ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷರಾದ ಸತೀಶ್ ಕುಂದರ್ ಬಾರಿಕೆರೆ ವಹಿಸಿದ್ದರು.
ಅವರು ಮಾತನಾಡಿ ವಿಕಲಚೇತನರು ಯಾವ ರೀತಿಯಲ್ಲೂ ಇತರರಿಗೆ ಕಡಿಮೆ ಸಾಮರ್ಥ್ಯ ಹೊಂದಿಲ್ಲ. ಸರಕಾರದ ಸೌಲಭ್ಯವನ್ನು ಸಮರ್ಪಕವಾಗಿ ಸದುಪಯೋಗ ಪಡೆಯಲು ಸೂಚಿಸಿದರು.

ವಿಕಲ ಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ತಾಲೂಕು ಸಂಯೋಜಕರಾದ ಮಧುಸೂದನ್ ಅವರು ಮಾಹಿತಿ ನೀಡಿದರು.

ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿಕಲ ಚೇತನರ ವೈದ್ಯಕೀಯ ನೆರವಿಗೆ ಸಹಾಯ ಧನದ ಚೆಕ್ ವಿತರಿಸಲಾಯಿತು.
ಈ ಸಂಧರ್ಭದಲ್ಲಿ ಉಪಾಧ್ಯಕ್ಷೆ ಶ್ರೀಮತಿ ಸರಸ್ವತಿ, ಸದಸ್ಯರಾದ ವಾಸು ಪೂಜಾರಿ, ಶ್ರೀಮತಿ ವಿದ್ಯಾ, ಶ್ರೀಮತಿ ಅಶ್ವಿನಿ, ಶ್ರೀಮತಿ ಸೀತಾ, ಆಶಾ ಕಾರ್ಯಕರ್ತೆಯರು, ವಿಕಲಚೇತನ ಫಲಾನುಭವಿಗಳು ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಅವರು ನಿರೂಪಿಸಿದರು ಹಾಗೂ ಕಾರ್ಯದರ್ಶಿ ಶ್ರೀಮತಿ ಸುಮತಿ ಅಂಚನ್ ಅವರು ವಂದಿಸಿದರು.