

ಡೈಲಿ ವಾರ್ತೆ:JAN/18/2026

ಕುಂದಾಪುರ| ಟಿಪ್ಪರ್ ಡಿಕ್ಕಿ – ಪಾದಚಾರಿ ಗಂಭೀರ ಗಾಯ

ಕುಂದಾಪುರ: ರಸ್ತೆ ಬದಿಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಮಿನಿ ಟಿಪ್ಪರ್ ಡಿಕ್ಕಿ ಹೊಡೆದು ಗಂಭೀರ ಗಾಯ ಗೊಂಡ ಘಟನೆ ಬಳ್ಕೂರು ಗ್ರಾಮದ ಸಿದ್ದಾಪುರ- ಕುಂದಾಪುರ ರಾಜ್ಯ ಹೆದ್ದಾರಿ 52ರ ರಸ್ತೆಯಲ್ಲಿ ದುರ್ಗಾ ಕ್ಯಾಶ್ಯೂ ಇಂಡಸ್ಟ್ರೀಸ್ ಬಳಿ ಸಂಭವಿಸಿದೆ.
ಗಂಭೀರ ಗಾಯಗೊಂಡ ವ್ಯಕ್ತಿ ರುದ್ರ ಪೂಜಾರಿ (52) ಎಂದು ಗುರುತಿಸಲಾಗಿದೆ.
ಮಿನಿ ಟಿಪ್ಪರ್ ಚಾಲಕ ಬಾಜಿಲ್ ಡಿಸೋಜಾ ಅತೀ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿಕೊಂಡು ಬಂದುbರಸ್ತೆ ಬದಿಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ರುದ್ರ ಪೂಜಾರಿ ಅವರಿಗೆ ಡಿಕ್ಕಿ ಹೊಡೆದಿದ್ದಾರೆ.
ಸ್ಥಳೀಯರು ಟಿಪ್ಪರನ್ನು ತಡೆದು ನಿಲ್ಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗಾಯಗೊಂಡ ರುದ್ರ ಪೂಜಾರಿ ಅವರನ್ನು ಚಿಕಿತ್ಸೆಗಾಗಿ ಕುಂದಾಪುರ ಚಿನ್ಮಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.